
ಭಾಗ್ಯದಾ ಬಳೆಗಾರ ಹೋಗಿ ಬಾ ತವರೀಗೆಹಾಡು ಕೇಳದವರಾರು?ಆದರೆ ಈಗ ಬಳೆ ತೊಡುವವರೂ ಕಡಿಮೆಯಾಗುತ್ತಿದ್ದಾರೆ!ಸಾಮಾನ್ಯವಾಗಿ ಹುಡುಗಿಯರು, ಮಹಿಳೆಯರು ಇಡುವ ಕುಂಕುಮ, ಸರ, ಕಿವಿಯೋಲೆ, ಮೂಗುತಿ, ಜಡೆಗಳೆಲ್ಲ ಇಲ್ಲವಾಗುತ್ತಿರುವಂತೆಯೇ ಬಳೆ ಇಡುವವರೂ ವಿರಳವಾಗುತ್ತಿದ್ದಾರೆ. ಬಂಗಾರದ ಬೆಲೆ ಜಾಸ್ತಿಯಾಗುತ್ತಿದ್ದರೂ ಬಳೆ ಮಾಡಿಸುವವರು ಹೆಚ್ಚು ಇದ್ದಾರಾದರೂ ತಮ್ಮ ಕೈಗಳಿಗೆ ತೊಡುವವರು ಕಡಿಮೆಯಾಗುತ್ತಿದ್ದಾರೆ.ಮಣ್ಣಿನ, ಗಾಜಿನ ಬಳೆಗಳು ಸಾಮಾನ್ಯವಾಗಿ ಇರುತ್ತಿದ್ದವು. ದೇವೀ ದೇಗುಲಗಳಲ್ಲಿ ಇವುಗಳನ್ನು ಪ್ರಸಾದವಾಗಿ ಕೊಡುವ ಕ್ರಮವೂ ಇತ್ತು. ಇತ್ತೀಚಿಗೆ ಎಲ್ಲವೂ ಪ್ಲಾಸ್ಟಿಕ್ಮಯವಾದಂತೆ ಪ್ಲಾಸ್ಟಿಕ್ನ, ಮರದ ಬಳೆಗಳೂ ಬರತೊಡಗಿವೆ. ಬೆಳ್ಳಿ, ಚಿನ್ನದ ಬಳೆಗಳಿಗೂ ಬೇಡಿಕೆ ಇದ್ದು, ಜ್ಯುವೆಲ್ಲರ್ಸ್ಗಳಲ್ಲಿ ಕೊಂಡುಕೊಳ್ಳಬಹುದಾಗಿದೆ. ಗಂಡಸರೂ ಕಡಗವನ್ನು(ಬಳೆ) ಹರಕೆ, ಗೌರವ, ಆರೋಗ್ಯದ ಸಂಕೇತವಾಗಿ ತೊಟ್ಟುಕೊಳ್ಳುತ್ತಾರೆ. ದರ್ಶನಪಾತ್ರಿಗಳು, ಭೂತಕೋಲ ಕಟ್ಟುವ ನಲಿಕೆಯವರು, ದೇವಸ್ಥಾನಗಳಲ್ಲಿ ದೇವರ ಮೂರ್ತಿ ಹೊರುವವರು ಕಡಗ, ಬಳೆಯನ್ನು ತೊಟ್ಟುಕೊಳ್ಳುವುದನ್ನು ಕಾಣಬಹುದಾಗಿದೆ.ಹೆಚ್ಚಾಗಿ ಹೆಂಗಸರೇ ಬಳೆ ತೊಡುತ್ತಾರೆ. ಕೆಲವು ಗಂಡಸರು ತನ್ನ ಗಂಡಸುತನವನ್ನು ಪ್ರತಿಪಾದಿಸುತ್ತ, ಕೋಪದಿಂದ ಹೇಳುವುದುಂಟು; ನಾನೇನು ಬಳೆತೊಟ್ಟುಕೊಂಡಿಲ್ಲ ಅಂತ!ಸಾಮಾನ್ಯವಾಗಿ ಸಂತೆಗಳಲ್ಲಿ, ಜಾತ್ರೆಗಳಲ್ಲಿ, ದೇವಸ್ಥಾನಗಳ ಹತ್ತಿರ ಬಳೆ ಮಾರುವ ಅಂಗಡಿಗಳು, ಮಾರುವವರು ಸಿಗುತ್ತಾರೆ. ಬಳೆಗಾರರು ಅಂತಲೇ ಉಪಜಾತಿ ಇದೆ. ಹಿಂದೆಲ್ಲ ಮನೆಮನೆಗಳಿಗೆ ಬಂದು ಮಾರಾಟ ಮಾಡುವವ ಬಳೆಗಾರರು ಕಂಡುಬರುತ್ತಿದ್ದರು. ಇತ್ತೀಚಿಗೆ ಇಂತಹ ಬಳೆಗಾರರು ಸಿಗುವುದೇ ಇಲ್ಲ ಎಂಬಷ್ಟು ಅಪರೂಪವಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಸಿಗುವುದೇ ಇಲ್ಲ. ಮೂಲ್ಕಿಯ ಲಿಂಗಪ್ಪಯ್ಯಕಾಡಿನ ಬಳಿ ಉತ್ತರಕನ್ನಡದ ಮಂದಿ ಸಾವಿರಗಟ್ಟಲೆ ಸಂಖ್ಯೆಯಲ್ಲಿದ್ದಾರೆ. ಅವರು ಬಡವರಾದರೂ ಮಣ್ಣು, ಪ್ಲಾಸ್ಟಿಕ್ ಮುಂತಾದವುಗಳಿಂದ ತಯಾರಿಸಲ್ಪಟ್ಟ ಸರ, ಬಳೆ, ಕಿವಿಯೋಲೆ, ಮೂಗುತಿಗಳನ್ನು ತೊಟ್ಟುಕೊಳ್ಳುವುದನ್ನು ಕಾಣಬಹುದು. ಈ ಪರಿಸರದಲ್ಲಿ ಇತ್ತೀಚಿಗೆ ಕಂಡು ಬಂದ ಬಳೆಗಾರ ನನ್ನ ಮೂರನೆಯ ಕಣ್ಣಿಗೆ ಕಂಡದ್ದು ಹೀಗೆ!







ದೇಗುಲಕ್ಕೆ ವರುಷಕ್ಕೆ ಸುಮಾರು ೧೩ಸಾವಿರ ಸೀರೆ ಹರಕೆ ರೂಪದಲ್ಲಿ ಬರುತ್ತದೆ. ಹಿಂದೆ ಒಂದು ಸೀರೆಯನ್ನು ನಾಲ್ಕೈದು ತುಂಡು ಮಾಡಿ 











ನಾವು ಒಂದಿಷ್ಟು ಗೆಳೆಯರು ಹೆಜಮಾಡಿಯಿಂದ ಕಾಪು ತನಕ ಹದಿನೈದು ಕಿ.ಮೀ.ಗಳಷ್ಟು ದೂರ ಕಡಲ ತೀರದಲ್ಲೇ ನಡೆದುಕೊಂಡು ಹೋದೆವು. ಅಮೇರಿಕಾದಿಂದ ಗೆಳೆಯರಾದ ಗಿಲ್ಬರ್ಟ್ ಡಿಸೋಜ ಪ್ರೀತಿಯಿಂದ ಕಳುಹಿಸಿದ ಕೆಮರಾದಿಂದ ಕ್ಲಿಕ್ಕಿಸಿದ ಬೀಚ್ ನಡಿಗೆಯ ಒಂದಿಷ್ಟು ಚಿತ್ರಗಳು ನಿಮಗಾಗಿ.
ಅದೇ ಹೊಳೆಯಲ್ಲಿ ಒಬ್ಬರು ಬಲೆ ಬೀಸಿ ಮೀನು ಹಿಡಿಯುತ್ತಿದ್ದರು.
ನೋಡಿ, ಆ ಕಡೆಯ ಕಡಲ ತೆರೆ ಈ ಕಡೆಯ ಹೊಳೆಯ ನೀರು ಒಂದಾಗುತ್ತಿದೆ. ಮಳೆ ಜೋರು ಬಂದರೆ ಬೀಚ್ ನಡಿಗೆ ಬಂದ್!
ಮಳೆ ಇಲ್ಲದಿದ್ದರೂ ಕಡಲ ಅಬ್ಬರಕ್ಕೇನೂ ಅಡ್ಡಿಯಿಲ್ಲ. ಒಂದರ ಹಿಂದೊಂದು ಎಂದು ತೆರೆಗಳು ಬರುತ್ತಲೇ ಇರುತ್ತವೆ. ಅವು ಸೋಲುವುದಿಲ್ಲ. ಮತ್ತೆ ಎದ್ದು ಬಂದು ದಡಕ್ಕೆ ಅಪ್ಪಳಿಸುತ್ತವೆ.
ಮನೆಯಲ್ಲಿ ಭೂತ ಪ್ರೇತ ದೈವಗಳ ಉಪಟಳವಿದ್ದಾಗ ಅವನ್ನು ಮಣಿಮಂಚದ ಸಮೇತ ಸಮುದ್ರಕ್ಕೆ ಬಿಸಾಡಿ ಉಚ್ಛಾಟಿಸುವ ನಂಬಿಕೆ ತುಳುನಾಡ ಕರಾವಳಿಯಲ್ಲಿದೆ. ಇದು ಹಾಗೆ ಬಿಟ್ಟು ಹೋದ ಅನಾಥ ಭೂತದ ಮಂಚ. ಇಂತಹ ನೂರಾರು ಮರದ ಆಸನ, ಮಂಚಗಳು ಕಡಲ ತಡಿಯಲ್ಲಿ ಕಾಣ ಸಿಕ್ಕವು.
ಬಾಟಲಿಗಂಟಿದ ಜೀವಂತ ಚಿಪ್ಪು ಪ್ರಾಣಿಯ ರಾಶಿ.
ಬೀಚ್ನಲ್ಲಿ ಬಾಟಲಿ, ಪ್ಲಾಸ್ಟಿಕ್, ಬಲ್ಬ್ ಮುಂತಾದ ವಸ್ತುಗಳು ರಾಶಿರಾಶಿ ಸಿಗುತ್ತಲೇ ಹೋಗುತ್ತವೆ.
ನಿಂತ ದೋಣಿಯಲ್ಲಿ ಕೂತು ಕೊಂಚ ವಿಶ್ರಾಂತಿ ಪಡೆದ ನಮಗೆ ಪ್ರಕ್ರತಿ ಎಂಬ ಖಾಸಗಿ ರೆಸಾರ್ಟ್ ನೋಡುವ ಅವಕಾಶವೂ ಸಿಕ್ಕಿತು.
ಗೆಳೆಯ ಯಶವಂತ ವಿಶ್ರಾಂತಿಗೆಂದು ಸುಮ್ಮನೆ ಕೂತು ಸಮುದ್ರದ ಫೊಟೋ ತೆಗೆಯುತ್ತಿದ್ದ. ಅದನ್ನು ನೋಡುತ್ತಿದ್ದ ನಾಯಿಯೊಂದು ಕೆಮರಾ ಮುಂದೆ ಬಂದು ನಿಂತು ನಗುತ್ತ ಫೋಸು ಕೊಟ್ಟದ್ದನ್ನು ನನ್ನ ಕೆಮರಾ ಕಂಡಿತು!









